Home Latest ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಶ್ರೀಕೃಷ್ಣ ಮಠಕ್ಕೆ ಭೇಟಿ…!!

ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಶ್ರೀಕೃಷ್ಣ ಮಠಕ್ಕೆ ಭೇಟಿ…!!

ಉಡುಪಿ: ಖ್ಯಾತ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.

ಭೇಟಿಯ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದು, ಗೌರವಪೂರ್ವಕವಾಗಿ ಸ್ವಾಗತಿಸಿದರು.