ಶಿರಾಡಿ : ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಘಾಟ್ ನಲ್ಲಿ ನಡೆದಿದೆ.
ಶಿರಾಡಿ ಗಡಿ ದೇವಸ್ಥಾನದ ಮೇಲ್ಬಾಗದ ಪರಿಸರದಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್ ಗುಂಡ್ಯ ಹೊಳೆಗೆ ಬೀಳುವ ಸಾಧ್ಯತೆ ಇತ್ತಾದರೂ ಹೆದ್ದಾರಿ ಬದಿಯ ಮರಗಳು ತಡೆದಿದೆ.
ಘಟನಾ ಸ್ಥಳಕ್ಕೆ ಸಕಲೇಶಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.