ಕಾರ್ಕಳ: ಮನೆಯ ಹಿತ್ತಲಿನಲ್ಲಿ ಕಸಕ್ಕೆ ಬೆಂಕಿ ಹಾಕುವ ವೇಳೆ ಅನಾಹುತಕ್ಕೀಡಾಗಿ ಗಂಭೀರವಾಗಿ ಸುಟ್ಟು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ
ನಿಟ್ಟೆ ಗ್ರಾಮದ ವಾಸಿಯಾದ ಪುಪ್ಪವತಿ ಜೆ. ಶೆಟ್ಟಿ (70) ಅವರ ಗಂಡ ಎಸ್. ಜಯಕರ ಶೆಟ್ಟಿ (80) ಅವರು ಏಪ್ರಿಲ್ 9 ರಂದು ಬೆಳಿಗ್ಗೆ 10:30 ಗಂಟೆಗೆ ಮನೆಯ ಹಿತ್ತಲಿನಲ್ಲಿ ಕಸಕ್ಕೆ ಬೆಂಕಿ ಹಾಕುವ ವೇಳೆ ಅನಾಹುತಕ್ಕೀಡಾಗಿ ಗಂಭೀರವಾಗಿ ಸುಟ್ಟು ಗಾಯಗೊಂಡ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.





