Home Dskshina Kannada ಕಡಬ: ವಿಷ ಸೇವಿಸಿ ಯುವಕ ಆತ್ಮಹತ್ಯೆ…!

ಕಡಬ: ವಿಷ ಸೇವಿಸಿ ಯುವಕ ಆತ್ಮಹತ್ಯೆ…!

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.

 

ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ ಹೂವಪ್ಪ ಗೌಡ ಎಂಬುವವರ ಪುತ್ರ ಕಿಶನ್‌ ಎ ಹೆಚ್‌ (32) ಎಂದು ಗುರುತಿಸಲಾಗಿದೆ.

 

ಕಳೆದ ಎರಡು ವರ್ಷಗಳಿಂದ ಗುತ್ತಿಗಾರಿನ ಸಂಸ್ಥೆಯೊಂದರಲ್ಲಿ ಲೋನ್‌ ಆಫೀಸರ್‌ ಆಗಿ ಕೆಲಸ ಮಾಡುತ್ತಿದ್ದರು.

 

ಕಳೆದ ಎರಡು ಮೂರು ತಿಂಗಳಿನಿಂದ ಕಿಶನ್‌ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಕುರಿತು ಸ್ಪಷ್ಟ ಕಾರಣ ಮನೆ ಮಂದಿಯಿಂದ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

 

ಮಾ.21 ರಂದು ರಾತ್ರಿ ಸುಮಾರು 7.30ಕ್ಕೆ ಕಿಶನ್‌ ತನ್ನ ತಮ್ಮ ಸುಚಿನ್‌ಗೆ ಫೋನ್‌ ಮಾಡಿ, ನಾನು ಪುಳಿಕುಕ್ಕು ಸಂಕದ ಬಳಿ ವಿಷ ಸೇವಿಸುತ್ತೇನೆ ಎಂದು ತಿಳಿಸಿದ್ದು, ಕೂಡಲೇ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದಾಗ ಕಿಶನ್‌ ಪುಳಿಕುಕ್ಕು ಸಂಕದ ಬಳಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆಂದು ಮಾ.25 ರಂದು ಮಂಗಳೂರಿನ ಎಜೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ 20 ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ಕಿಶನ್‌ ಎ.14 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

 

ಈ ಕುರಿತು ಮೃತರ ಸಹೋದರ ತನುರಾಜ್‌ ಎ ಹೆಚ್‌ ನೀಡಿದ ದೂರಿನಂತರ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.