Home Latest ಕಲ್ಮಾಡಿ: ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ನೂತನ ಗುಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ…!!

ಕಲ್ಮಾಡಿ: ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ನೂತನ ಗುಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ…!!

ಮಲ್ಪೆ: ಉಡುಪಿ ಜಿಲ್ಲೆಯ ಕೊಡವೂರು ಗ್ರಾಮದ ಕಲ್ಮಾಡಿ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ನೂತನ ಗುಡಿ ನಿರ್ಮಾಣ ಕಾರ್ಯಕ್ಕೆ ಇಂದು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿತು.

ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿ (ರಿ.) ಕಲ್ಮಾಡಿ ಹಾಗೂ ಕುಷ್ಟಪ್ಪ ನಾಯಕ್ ಕುಟುಂಬಸ್ಥರು, ಮಲ್ಪೆ ಇವರ ವಿಶೇಷ ಸಹಕಾರ ದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ನೂತನ ಗುಡಿ ನಿರ್ಮಾಣ ಕೈಗೊಳ್ಳಲಾಗುತ್ತಿದ್ದು, ಈ ಯೋಜನೆಗೆ ಭಕ್ತರು ಹಾಗೂ ದಾನಿಗಳ ಸಹಕಾರ ಅತ್ಯಂತ ಪ್ರಮುಖವಾಗಿದ್ದು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ನಡೆಯಲಿದೆ

ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕುಷ್ಟಪ್ಪ ನಾಯಕ್ ಕುಟುಂಬಸ್ಥರು, ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು,ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಭಾಗವಹಿಸಿ ಪೂಜೆಗಳಲ್ಲಿ ಪಾಲ್ಗೊಂಡರು.