Home Latest ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ…!!

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ…!!

ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಉತ್ತರಾದಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು,ಹಾಗೂ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರುಗಳ ಸಮ್ಮುಖದಲ್ಲಿ ಹಾಗೂ ಉಪಸ್ಥಿತಿಯಲ್ಲಿ ಶ್ರೀ ರಥಬೀದಿ – ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿ ಐ ಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐ ಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಉಭಯ ಮಠಗಳ ಶಿಷ್ಯ ವರ್ಗದವರು ಉಪಸ್ಥಿತರಿದ್ದರು.