ಮಣಿಪಾಲ: ಸ್ಕೂಟಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತರನ್ನು ಸಶ್ಮೀತ್ ಕೋಟ್ಯಾನ್ ಎಂದು ಗುರುತಿಸಲಾಗಿದೆ.
ಪೊಲೀಸ್ ಮಾಹಿತಿ ಪ್ರಕಾರ, ಉಮೇಶ್ (32) ಎಂಬವರು ದಿನಾಂಕ 30/04/2026 ರಂದು ತಮ್ಮ ಸ್ಕೂಟಿಯಲ್ಲಿ ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದರು. ಸಂಜೆ ಸುಮಾರು 6:05 ಗಂಟೆಗೆ ಮಣಿಪಾಲ ಕೆಎಫ್ಸಿ ಸಮೀಪ ರಾಷ್ಟ್ರೀಯ ಹೆದ್ದಾರಿ 169ಎ ನಲ್ಲಿ ತಲುಪಿದ ವೇಳೆ, ಮಣಿಪಾಲದಿಂದ ಉಡುಪಿ ಕಡೆಗೆ ಬರುತ್ತಿದ್ದ ಸ್ಕೂಟಿ ನಂ. KA-20-HC-2699 ರ ಸವಾರ ಅಜಾಗರೂಕ ಹಾಗೂ ನಿರ್ಲಕ್ಷ್ಯವಾಗಿ ವಾಹನ ಚಲಾಯಿಸಿಕೊಂಡು ಬಂದು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದಾರೆ.
ಅಪಘಾತದ ಪರಿಣಾಮ ಸವಾರ ಸ್ಕೂಟಿ ಸಮೇತ ರಸ್ತೆಗೆ ಬಿದ್ದಿದ್ದು, ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 6:59 ಗಂಟೆಗೆ ಮೃತಪಟ್ಟಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




