Home Karavali Karnataka ಉಡುಪಿ ಕೊರಂಗ್ರಪಾಡಿ ಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ, ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ…!!

ಉಡುಪಿ ಕೊರಂಗ್ರಪಾಡಿ ಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ, ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ…!!

ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕೆಎಂಸಿ ಆಸ್ಪತ್ರೆ ಮಣಿಪಾಲ, ಗ್ರಾಮ ಪಂಚಾಯಿತ್ ಅಲೆವೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ, ಆಯುಷ್ಮಾನ್ ಆರೋಗ್ಯ ಕೇಂದ್ರ ಕೊರಂಗ್ರಪಾಡಿ ಇವರ ಸಂಯೋಜನೆಯಲ್ಲಿ ಉಚಿತ ನೇತ್ರ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ ಶಿಬಿರವನ್ನು ದಿನಾಂಕ 31/08/2025 ರ ಭಾನುವಾರವು ಉಡುಪಿ ಕೊರಂಗ್ರಪಾಡಿಯ ಪೂರ್ಣಭೋದ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ 12 ಗಂಟೆ ಯವರೆಗೆ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಅಲೆವೂರು ಗ್ರಾಮ ಪಂಚಾಯಿತಿಯ ಸದಸ್ಯರಾದ ಶ್ರೀ ಶಂಕರ್ ಪಾಲನ್, ಶ್ರೀ ಮನಮೋಹನ್, ಮಣಿಪಾಲ, ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ. ವೃತಿ ಮತ್ತು ಸಿಬ್ಬಂದಿ ವರ್ಗದವರು, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಶಿಲ್ಪ , ಸರಿತಾ ಹಾಗೂ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಜಯಶೀಲ ಮತ್ತು ಶಿವಕನ್ಯ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿ ಶ್ರೀಮತಿ ರೋಷನಿ ಇವರು ಏಡ್ಸ್ ರೋಗ – ವಿಕಿಪೀಡಿಯ ಹೆಚ್ಐವಿ ಸೋಂಕಿತ ತಾಯಿ ಯಿಂದ ಮಗುವಿಗೆ ಗರ್ಭವಸ್ಥೆಯಲ್ಲಿ ಪ್ರಸವ ಸಮಯದಲ್ಲಿ ಮತ್ತು ಎದೆ ಹಾಲು ಉಣಿಸುವ ಸಂದರ್ಭದಲ್ಲಿ ಸೋಂಕುಗಳಿಂದ ಸಂರಕ್ಷಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ನೂರಾರು ಮಂದಿ ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು