ಬ್ರಹ್ಮಾವರ: ತಾಯಿ ಹಾಗೂ ಮಗು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಮೃತರನ್ನು ತಾಯಿ -ಸುಷ್ಮೀತಾ (23) ಮಗು- ಶ್ರೇಷ್ಠ (1ವರ್ಷ 6 ತಿಂಗಳು) ಆತ್ಮಹತ್ಯೆಗೆ ಶರಣಾದವರು.
ಪತಿ ಕೋರ್ಟ್ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ತಾಯಿ ಮಗುವಿನ ಆತ್ಮಹತ್ಯೆಗೆ ಕಾರಣವನ್ನು ಸರಿಯಾಗಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಬ್ರಹ್ಮಾವರ ಪೊಲೀಸರು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ.ಉಡುಪಿ ಜಿಲ್ಲಾ ಎಸ್ ಪಿ ಹರಿರಾಮ್ ಶಂಕರ್ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.