Home Crime ಕೋಡಿಬೇಂಗ್ರೆಯಲ್ಲಿ ದೋಣಿ ದುರಂತ ಪ್ರಕರಣ: ಮೂವರು ಆರೋಪಿಗಳ ಬಂಧನ…!!

ಕೋಡಿಬೇಂಗ್ರೆಯಲ್ಲಿ ದೋಣಿ ದುರಂತ ಪ್ರಕರಣ: ಮೂವರು ಆರೋಪಿಗಳ ಬಂಧನ…!!

{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}

ಉಡುಪಿ :ಜನವರಿ 31 :ಬ್ರಹ್ಮಾವರ ತಾಲೂಕಿನ ಕೋಡಿಬೇಂಗ್ರೆ ಅಳಿವೆಬಾಗಿಲು ಬಳಿ ಸ್ವರ್ಣ ನದಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದಿನಾಂಕ 26/01/2026 ರಂದು ಬೆಳಿಗ್ಗೆ ಸುಮಾರು 10:45 ಗಂಟೆಗೆ ಮೈಸೂರು ನಿವಾಸಿ ಗುರುಪ್ರಸಾದ್ (34) ಸೇರಿದಂತೆ ಒಟ್ಟು 29 ಪ್ರವಾಸಿಗರನ್ನು ಆರೋಪಿ ಸುಹಾಸ್ ಎಂಬವರು ಎರಡು ಪ್ರತ್ಯೇಕ ಬೋಟ್‌ಗಳಲ್ಲಿ (ಒಂದು ಬೋಟ್‌ನಲ್ಲಿ 14 ಮತ್ತು ಇನ್ನೊಂದರಲ್ಲಿ 15 ಜನರಂತೆ) ದೋಣಿ ವಿಹಾರಕ್ಕೆ ಕಳುಹಿಸಿದ್ದರು. ಬೆಳಿಗ್ಗೆ 11:15 ಗಂಟೆ ಸುಮಾರಿಗೆ ‘THE WAVE RIDER’ ಎಂಬ ಬೋಟ್ ಸ್ವರ್ಣ ನದಿಯಲ್ಲಿ ವಿಹಾರ ಮಾಡುತ್ತಿದ್ದಾಗ, ಅದರ ಚಾಲಕರಾದ ಸೂಫಿಯಾನ್ ಮತ್ತು ವಾಸು ಅವರುಗಳು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಏಕಾಏಕಿ ಎಡಬದಿಗೆ ತಿರುಗಿಸಿ ಚಲಾಯಿಸಿದ ಪರಿಣಾಮ ಬೋಟ್ ಮಗುಚಿ ಬಿದ್ದಿದೆ.

ಈ ಘಟನೆಯಲ್ಲಿ ಬೋಟ್‌ನಲ್ಲಿದ್ದ 14 ಜನರು ನೀರಿಗೆ ಬಿದ್ದಿದ್ದು, ಶಂಕರಪ್ಪ (27), ಕುಮಾರಿ ಸಿಂಧು.ಪಿ (23) ಹಾಗೂ ಕುಮಾರಿ ದಿಶಾ (26) ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಳಿದವರು ಅಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 08/2026 ಕಲಂ 284, 125(a), 106 BNS 2023ರಡಿ ಪ್ರಕರಣ ದಾಖಲಿಸಲಾಗಿತ್ತು. ನಂತರದ ತನಿಖೆಯಲ್ಲಿ, ಆರೋಪಿಗಳು ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೇ ದೋಣಿ ವಿಹಾರ ನಡೆಸಿದ್ದು, ಬೋಟ್ ಪ್ರವಾಸಿಗರ ವಿಹಾರಕ್ಕೆ ಸೂಕ್ತವೆಂಬ ಧೃಢೀಕರಣ ಪತ್ರವೂ ಇರಲಿಲ್ಲ ಎಂಬುದು ತಿಳಿದುಬಂದಿದೆ. ಅಲ್ಲದೇ ಲೈಫ್ ಜಾಕೆಟ್‌ಗಳಂತಹ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣ ಕೋಟ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದರಿಂದ ಪ್ರಕರಣವನ್ನು ಕೋಟ ಠಾಣೆಗೆ ವರ್ಗಾಯಿಸಲಾಗಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 14/2026 ಕಲಂ 284, 125(a), 106, 105, 110 ಜೊತೆಗೆ 3(5) BNS ರಡಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣದ ಆರೋಪಿಗಳಾದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20) ಮತ್ತು ವಾಸು ಮೆಂಡನ್ (52) ಅವರನ್ನು ಪೊಲೀಸರು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.