ಮಂಗಳೂರು : ನಗರ ಸಮೀಪದ ಸುರತ್ಕಲ್ ಇಲ್ಲಿನ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆನಿವಾಸಿ ಪ್ರಜ್ಞಾ(18) ಎಂಬವರು ಕಾಲೇಜಿಗೆಂದು ಹೋದವರು ನಾಪತ್ತೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಜ್ಞಾ ಅವರು ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದು. ಸೆ.1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ದೂರುದಾರರು ಪ್ರಜ್ಞಾಳು ಬಳಸುತ್ತಿದ್ದ ಮೊಬೈಲ್ ನಂಬ್ರಕ್ಕೆ ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿದೆ. ಬಳಿಕ ಆಕೆಯ ಸ್ನೇಹಿತೆಯರಲ್ಲಿ ವಿಚಾರಿಸಿದಾಗ ಪ್ರಜ್ಞಾಳು ಕಾಲೇಜಿಗೆ ಬಂದಿರುವುದಿಲ್ಲ ಎಂಬುದಾಗಿ ತಿಳಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರಾತ್ರಿಯಾದರೂ ಪ್ರಜ್ಞಾಳು ಮನೆಗೆ ಬಾರದೇ ಇದ್ದ ಕಾರಣ ದೂರುದಾರರು ಠಾಣೆಗೆ ಬಂದು ದೂರು ನೀಡುತ್ತಿದ್ದು ಕಾಣೆಯಾದ ಪ್ರಜ್ಞಾಳನ್ನು ಪತ್ತೆ ಮಾಡಿಕೊಡಬೇಕಾಗಿ ಎಂಬಿತ್ಯಾದಿ.ಎತ್ತರ ಸುಮಾರು5.3 ಅಡಿ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ ಕಪ್ಪು ಕೂದಲು ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ ಪ್ಯಾಂಟ್ ಧರಿಸಿದ್ದರು ಎನ್ನಲಾಗಿದೆ.