Home Karavali Karnataka ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷಿದ್ಧ : ನವೀನ್ ಸಾಲ್ಯಾನ್ ಖಂಡನೆ…!!

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷಿದ್ಧ : ನವೀನ್ ಸಾಲ್ಯಾನ್ ಖಂಡನೆ…!!

ಉಡುಪಿ: ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯನ್ನು ಎ. 29ರಂದು ಹಮ್ಮಿಕೊಂಡಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತವಾದ ಮಂಗಳಸೂತ್ರ ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶಪತ್ರದಲ್ಲಿ ಉಲ್ಲೇಖಿಸಿರುವ ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ.ರೈಲ್ವೆ ನೇಮಕಾತಿ ಮಂಡಳಿಯ ಈ ಕ್ರಮಕ್ಕ್ಕೆ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ಮಂಗಳಸೂತ್ರ ಸೇರಿದಂತೆ ಧಾರ್ಮಿಕ, ಭಾವನಾತ್ಮಕ ಸಂಕೇತಗಳನ್ನು ಅಪಮಾನಿಸುತ್ತಿದೆ.

ಪರೀಕ್ಷೆಯಲ್ಲಿ ಮಾಂಗಲ್ಯ ಸರ, ಜನಿವಾರವನ್ನು ಧರಿಸಬಾರದು ಎಂದು ಪ್ರವೇಶಪತ್ರದಲ್ಲಿ ಉಲ್ಲೇಖಿಸಿರುವ ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಬಿಜೆಪಿ, ಮೋದಿ ಸರ್ಕಾರ ಮಂಗಲಸೂತ್ರ, ಜನಿವಾರಕ್ಕೆ ಕೈ ಹಾಕಿದೆ!

ಹಿಂದುತ್ವದ ಹೆಸರಿನಲ್ಲಿ ಮತ ಪಡೆದು ಅಧಿಕಾರಕ್ಕೆ ಬಂದು ಹಿಂದೂ ವಿರೋಧಿ ನೀತಿಗಳ ಮೂಲಕ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ.

“ಮಾನ್ಯ ಜಿಲ್ಲಾಧಿಕಾರಿಗಳೇ, ಸಂಸದರೇ ಇಂತಹ ಆದೇಶವನ್ನು ಕೈಬಿಟ್ಟು ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ”, ಎಂದು ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ.

ರೈಲ್ವೆ ನೇಮಕಾತಿ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಚಿಹ್ನೆಯಾದ ಮಂಗಳಸೂತ್ರ ತೆಗೆಯಬೇಕೆಂದು ಸೂಚನೆ ನೀಡಿರುವುದು ಸರಿಯಲ್ಲ. ಹೆಣ್ಣುಮಕ್ಕಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗುತ್ತದೆ. ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮಕೈಗೊಳ್ಳಬೇಕು” ಎಂದು ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ತಿಳಿಸಿದ್ದಾರೆ.