ಉಡುಪಿ : ಆನ್ ಲೈನ್ ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಶೋಯಬ್ ಅಹಮದ್ ಹಾಗೂ ಮುದಾಸಿರ್ ಅಹಮದ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ರೂ. 2,00,000/- ನಗದು ಸ್ವಾಧೀನಪಡಿಸಲಾಗಿದೆ.
ಪ್ರಕರಣದ ಪಿರ್ಯಾದಿದಾರರಾದ ತೀರ್ಥರಾಜ ಶೆಣೈ(51), ಪೆರಂಪಳ್ಳಿ ಅಂಬಾಗಿಲು, ಶಿವಳ್ಳಿ ಗ್ರಾಮ, ಪುತ್ತೂರು, ಉಡುಪಿ ಎಂಬವರನ್ನು Capital Gains Crew ಎಂಬ ಟೆಲಿಗ್ರಾಂ ಗ್ರೂಪ್ ಗೆ Adi Nihal ಎಂಬ ಅಪರಿಚಿತ ವ್ಯಕ್ತಿ ಸೇರ್ಪಡೆ ಮಾಡಿದ್ದು, ಬಳಿಕ Fidility Institutional Partners F – 101 ಗ್ರೂಪ್ ಗೆ ಸೇರಿಸಿದ್ದು ಸದ್ರಿ ಗ್ರೂಫ್ನಲ್ಲಿ ಷೇರು ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶ ನೀಡುವುದಾಗಿ ಮಾಹಿತಿ ತಿಳಿಸಿ ಪಿರ್ಯಾದಿದಾರರನ್ನು ನಂಬಿಸಿ, ಆಸೆ ತೋರಿಸಿ, ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದು, ಇದನ್ನು ನಂಬಿದ ಫಿರ್ಯಾದಿದಾರರು ಅವರ ಮತ್ತು ಅವರ ತಾಯಿಯ ಬ್ಯಾಂಕ್ ಖಾತೆಯಿಂದ ದಿನಾಂಕ 19/12/2024 ರಿಂದ ದಿನಾಂಕ 07/01/2025 ರವರೆಗೆ ಅಪರಿಚಿತರು ಸೂಚಿಸಿದ ವಿವಿಧ ಖಾತೆಗಳಿಗೆ ಒಟ್ಟು 44,00,000/- ಹಣವನ್ನು ಹೂಡಿಕೆ ಮಾಡಿದ್ದು, ಪಿರ್ಯಾದಿದಾರರು ಹೂಡಿಕೆ ಮಾಡಿದ ಹಣವನ್ನಾಗಿ ಅಥವಾ ಲಾಭಾಂಶವನ್ನಾಗಲಿ ನೀಡದೇ ನಂಬಿಸಿ, ಮೋಸದಿಂದ ನಷ್ಟ ಉಂಟು ಮಾಡಿರುವುದಾಗಿದೆ ಈ ಬಗ್ಗೆ ತೀರ್ಥರಾಜ ಶೆಣೈ, ರವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 06/2025 ಕಲಂ 66(ಸಿ) 66(ಡಿ) ಐ.ಟಿ. ಆಕ್ಟ್ ಮತ್ತು 318(4) ಬಿಎನ್ಎಸ್ ಆಕ್ಟ್ ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್ ಐಪಿಎಸ್ರವರ ಆದೇಶದಂತೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ ನಾಯಕ್ ಮತ್ತು ಸಹಾಯಕ ಪೊಲೀಸ್ ಉಪಾಧೀಕ್ಷಕರಾದ ಡಾ. ಹರ್ಷ ಪ್ರಿಯಂವದ ಟ ಐಪಿಎಸ್ ರವರ ನಿರ್ದೇಶನ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ರವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿಗಳಾದ ರಾಜೇಶ್, ವೆಂಕಟೇಶ್ ಜಂತ್ರ, ರಾಘವೇಂದ್ರ, ಪವನ್, ದಿಕ್ಷೀತ್, ನಿಲೇಶ್ ರವರನ್ನೊಳಗೊಂಡ ವಿಶೇಷ ತಂಡವು ರಚಿಸಿ ಆರೋಪಿಗಳಾದ ಶೋಯಬ್ ಅಹಮದ್(28), ತಂದೆ: ರಫೀಕ್ ಅಹಮದ್, ವಾಸ: ರಹಮತ್ ಮೊಹಲ್ಲಾ, ಹುಣಸೂರು, ಮೈಸೂರು ಜಿಲ್ಲೆ ಮತ್ತು ಮುದ್ದಾಸಿರ್ ಅಹಮದ್(40), ತಂದೆ: ಖಾದಿರ್ ಅಹಮ್ಮದ್, ವಾಸ: #314, ರಹಮತ್ ಮೊಹಲ್ಲಾ, ಹುಣಸೂರು, ಮೈಸೂರು ಜಿಲ್ಲೆ ರವರನ್ನು ವಶಕ್ಕೆ ಪಡೆದು ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ರೂ 2,00,000/- ಹಣವನ್ನು ಮತ್ತು ಮೊಬೈಲ್ ಪೋನ್ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಸದ್ರಿ ಪ್ರಕರಣದಲ್ಲಿ ಇತರ ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ದಸ್ತಗಿರಿಗೆ ಬಾಕಿ ಇರುತ್ತದೆ.



