ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣ ಪೊಲೀಸರು ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿ ಅಕ್ರಮ ಗೋಹತ್ಯೆ ಜಾಲವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮುಹಮ್ಮದ್ ಸಾದಿಕ್ (30) ಎಂದು ಗುರುತಿಸಲಾಗಿದೆ.
ಬಂಟ್ವಾಳ ಪಟ್ಟಣ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿಗಾರ್ ಅವರಿಗೆ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತ ನಂತರ ಮೇ 27 ರ ರಾತ್ರಿ ದಾಳಿ ನಡೆಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಖಚಿತ ಸುಳಿವಿನ ಮೇರೆಗೆ ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ, ಪೊಲೀಸ್ ಸಿಬ್ಬಂದಿಯೊಂದಿಗೆ ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿರುವ ಆವರಣದ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ತಪಾಸಣೆಯ ಸಮಯದಲ್ಲಿ ಮನೆಯ ಹಿಂದೆ ಇರುವ ಶೆಡ್ನಲ್ಲಿ ಮಾಂಸವನ್ನು ಕತ್ತರಿಸುತ್ತಿರುವುದು ಅಧಿಕಾರಿಗಳಿಗೆ ಕಂಡುಬಂದಿದೆ ಎಂದು ಹೇಳಲಾಗಿದೆ.
ವಿಚಾರಣೆಯ ಸಂದರ್ಭ ಆರೋಪಿಗಳು ಅಗತ್ಯವಿರುವ ಪರವಾನಗಿ ಅಥವಾ ಅಧಿಕೃತ ಅನುಮತಿಯಿಲ್ಲದೆ ಕಾನೂನುಬಾಹಿರವಾಗಿ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ದಾಳಿಯ ಸಂದರ್ಭ ಒಂದು ಪ್ರಾಣಿಯನ್ನು ಈಗಾಗಲೇ ಹತ್ಯೆ ಮಾಡಲಾಗಿದೆ ಮತ್ತು ಕತ್ತರಿಸಿದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರು ಜೀವಂತ ದನಗಳು, ಸಾಗಾಟಕ್ಕೆ ಬಳಸಲಾಗಿದೆ ಎಂದು ಶಂಕಿಸಲಾದ ಕಾರು ಮತ್ತು ಆಪಾದಿತ ಅಪರಾಧಕ್ಕೆ ಸಂಬಂಧಿಸಿದ ಇತರ ವಸ್ತುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




