ಉಡುಪಿ: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ ಆಯ್ಕೆಯಾದ ಶ್ರೀ ಸುಕೇಂದ್ರ ಇವರಿಗೆ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದಿಸಲಾಯಿತು.
ಇವರು ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ವೃತಿಮಾಡುತ್ತಿದ್ದು ಇದೀಗ ಉಡುಪಿ ಜಿಲ್ಲೆಯಲ್ಲಿಯೇ ಆಯ್ಕೆಯಾದ ಏಕೈಕ ನ್ಯಾಯದೀಶರಾಗಿರುತ್ತಾರೆ. ಅಧಿವಕ್ತ ಪರಿಷತ್ ಜಿಲ್ಲಾ ವತಿಯಿಂದ ಇವರಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್ ಅಧ್ಯಕ್ಷರಾದ ಶ್ರೀ ಸಂತೋಷ್ ಹೆಬ್ಬಾರ್ ರವರು ಪ್ರಾಸ್ತವಿಕ ಭಾಷಣ ಮಾತನಾಡಿದ್ದು, ಉಡುಪಿ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯಾದ ಶ್ರೀ ರಾಜೇಶ್ ಎ.ಆರ್ ಅಭಿನಂದನ ಮಾತುಗಳನ್ನಾಡಿದ್ದು,. ವಕೀಲರ ಸಂಘದ ಮಾಜಿ ಸಾಂಸ್ಕತಿಕ ಕಾರ್ಯದರ್ಶಿ ಯಾದ ಶ್ರೀ ಸಂತೋಷ್ ಕುಮಾರ್ ಮೂಡುಬೆಳ್ಳೆ ನಿರೂಪಣೆ ಮಾಡಿದ್ದು, ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಆರೂರು ಸುಕೇಶ್ ಶೆಟ್ಟಿ ಯವರು ಧನ್ಯವಾದಗಳನ್ನು ನುಡಿದಿರುತ್ತಾರೆ. ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್ ಪದಾಧಿಕಾರಿಗಳಾದ ಹಾಗೂ ನ್ಯಾಯವಾದಿ ಗಳಾದ ಶ್ರೀಮತಿ ಶಶೀಕಲಾ ತೋನ್ಸೆ, ಬ್ರಹ್ಮಾವರ ವಕೀಲರ ಸಂಘದ ಉಪಾಧ್ಯಕ್ಷರಾದ ಕರ್ಜೆ ಬಾಲಕ್ರಷ್ಣ ಶೆಟ್ಟಿ, ಉಡುಪಿ ವಕೀಲರ ಸಂಘದ ಜೊತೆ ಕಾರ್ಯದರ್ಶಿ ಶ್ರೀ ಗಿರೀಶ್ ಎಸ್.ಪಿ ಏಳಿಂಜೆ,ವಕೀಲರ ಸಂಘದ ಮಾಜಿ ಜೊತೆ ಕಾರ್ಯದರ್ಶಿ ಶ್ರೀ ರವೀಂದ್ರ ಬೈಲೂರು ,ಶ್ರೀ ನಾಗರಾಜ್ ಕಿನ್ನಿಮೂಲ್ಕಿ, ಶ್ರೀ ಆಶಿಶ್ ಶೆಟ್ಟಿ ಬೋಳ, ಶ್ರೀಮತಿ ಸುಚಿತ ಶೆಟ್ಟಿ, ಕಾವ್ಯ ನಾಯ್ಕ್ , ಮೇಘನಾ, ಶ್ರೀಮತಿ ಸುಚೇತಾ ಶೆಟ್ಟಿ,ಶ್ರೀ ಜಯಂತ್ ರಾವ್, ಶ್ರೀ ಪೆಲಾತ್ತೂರು ರೋಹಿತ್ ಆಚಾರ್ಯ , ಶ್ರೀನಿಧಿ ಸುವರ್ಣ, ಪ್ರಸನ್ನ ಶೆಣೈ, ಶ್ರೀ ಲೀವನ್ ಪ್ಲಾ ಮತ್ತು ಇತರರು ಉಪಸ್ಥಿತರಿದ್ದರು .




