ಬಾಗಲಕೋಟೆ: ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿ ನಡೆದಿದೆ.
ದಾನಮ್ಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ. ಗಣತಿ ಕಾರ್ಯ ಮುಗಿಸಿಕೊಂಡು ಪುತ್ರನ ಜೊತೆ ಮನೆ ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಮೊದಲೇ ಗಣತಿ ಕಾರ್ಯದ ತಾಂತ್ರಿಕ ಸಮಸ್ಯೆಯಿಂದಾಗಿ ಎರಡ್ಮೂರು ದಿನಗಳಿಂದ ಶಿಕ್ಷಕಿ ದಾನಮ್ಮ ಟೆನ್ಶನ್ನಲ್ಲಿದ್ದರು. ಹೀಗಾಗಿ ಅವರನ್ನು ಕರೆದುಕೊಂಡು ಹೋಗಲು ಮಗ ವಿಕಾಸ್ ಬೈಕ್ ತೆಗೆದುಕೊಂಡು ಬಂದಿದ್ದ. ಮಗನ ಜೊತೆ ಬರುವಾಗ ಹದಗೆಟ್ಟ ರಸ್ತೆಯಿಂದ ಬ್ಯಾಲೆನ್ಸ್ ತಪ್ಪಿ ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.