ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15), ಆಶೀಶ್ (14) ನೀರು ಪಾಲಾಗಿದ್ದಾರೆ.
ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ ಪಾರಾಗಿದ್ದಾನೆ. ನೀರುಪಾಲಾದ ಮೂವರ ಮೃತದೇಹ ಪತ್ತೆಯಾಗಿದೆ.
ಮೃತರಲ್ಲಿ ಓರ್ವ ಪಿಯುಸಿ ವಿದ್ಯಾರ್ಥಿಯಾಗಿದ್ದು ಇನ್ನಿಬ್ಬರು ಸರಕಾರಿ ಶಾಲೆಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನಾ ಸ್ಥಳಕ್ಕೆ ಬೈಂದೂರು ಪಿಎಸ್ಐ ತಿಮ್ಮೇಶ್ ಭೇಟಿ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





