ಉಡುಪಿ : ಉಡುಪಿ ಜಿಲ್ಲಾ ನಾಗರೀಕ ಸಮಿತಿ ಟ್ರಸ್ಟಿನ ಆಯೋಜನೆಯಲ್ಲಿ ಇಂದ್ರಾಳಿಯ “ಮೇಲ್ಸೇತುವೆ ಲೋಕಾರ್ಪಣೆಯ ಪ್ರಯುಕ್ತ ಹರ್ಷೋತ್ಸವ” ಕಾರ್ಯಕ್ರಮವು ಪೇಜಾವರ ಅಧೋಕ್ಷಜ ಮಠದ ಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳವಾರ ನಡೆಯಿತು.
ಇಂದ್ರಾಳಿಯ ನವೀಕೃತ ಮೇಲ್ಸೇತುವೆ ಸನಿಹ ನಡೆದ ಕಾರ್ಯಕ್ರಮದಲ್ಲಿ ಮಾತಾನಾಡಿದ ಸ್ವಾಮೀಜಿಯವರು, ಮೇಲ್ಸೇತುವೆ ಲೋಕಾರ್ಪಣೆಯ ವಿಚಾರವಾಗಿ ಹರ್ಷ ವ್ಯಕ್ತಪಡಿಸಿದರು. ಸೇತುವೆ ಬಳಿ ವಿದ್ಯಾ ಸಂಸ್ಥೆಗಳಿದ್ದು, ಶಾಲಾ ವಿದ್ಯಾರ್ಥಿಗಳು ವಾಹನ ದಟ್ಟಣೆ ಇರುವ ಹೆದ್ದಾರಿ ದಾಟಲು ಅಪಾಯ ಎದುರಿಸಬೇಕಾದ ಪರಿಸ್ಥಿತಿ ಇದ್ದು, ಜನಪ್ರತಿನಿಧಿಗಳು ಸೂಕ್ತ ಮಾರ್ಗದ ವ್ಯವಸ್ಥೆಗೊಳಿಸಲು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಯಶಪಾಲ್ ಸುವರ್ಣ, ಡಿವೈಎಸ್ಪಿ ಡಿ.ಟಿ ಪ್ರಭು, ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ನಾಗರೀಕ ಸಮಿತಿಯ ಅಧ್ಯಕ್ಷ ಎಂ ನಾಗೇಶ್ ಹೆಗ್ಡೆ, 80 ಬಡಗುಬೆಟ್ಟು ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ನಾಗರೀಕ ಸಮಿತಿಯ ಕಾರ್ಯಕರ್ತರಾದ ಕೆ.ಬಾಲಗಂಗಾಧರ್ ರಾವ್, ತಾರಾನಾಥ್ ಮೇಸ್ತ ಶಿರೂರು, ಸತೀಶ್ ಕುಮಾರ್, ಯಾದವ್, ಜಯಶ್ರೀ, ಅಶ್ವಿನಿ, ಪ್ರಶಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸಹಭಾಗಿತ್ವ ವಹಿಸಿದ್ದ ಉಡುಪಿಯ ಜಹಾಂಗೀರ್ ಭಟ್ಸ್ ಸ್ವೀಟ್ಸ್ ಹೌಸ್, ಹಾಗೂ ವೇದಾಂತ್ ವೆಜ್ ರೆಸ್ಟೋರೆಂಟಿನ ನುರಿತ ಸಿಹಿ ಖಾದ್ಯತಜ್ಞರು ಸ್ಥಳದಲ್ಲಿಯೇ ತಯಾರಿಸಲಾದ 4 ಸಾವಿರ ಜೀಲೆಬಿಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.


