Home Latest ನಾಳೆ ಕ.ರ.ವೇ ಯಿಂದ ತಮಿಳುನಾಡು ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ…!!

ನಾಳೆ ಕ.ರ.ವೇ ಯಿಂದ ತಮಿಳುನಾಡು ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ…!!

ಉಡುಪಿ : ಮೇಕೆದಾಟು ಯೋಜನೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ನಾಳೆ ತೀವ್ರ ಪ್ರತಿಭಟನೆ ನಡೆಯಲಿದೆ.

ನಾಳೆ ತಮಿಳುನಾಡು ಮುಖ್ಯಮಂತ್ರಿಗಳ ಕೊಲ್ಲೂರು ಭೇಟಿಯ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಹಲವು ಮುಖಂಡರುಗಳ ಉಪಸ್ಥಿತಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲಾಗುವುದು. ನಂತರ ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ತಿಳಿಸಿರುತ್ತಾರೆ