Home Crime ಬ್ರಹ್ಮಾವರ : ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ…!!

ಬ್ರಹ್ಮಾವರ : ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ…!!

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಹತ್ತಿರ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಮರದ ಜಂತಿಗೆ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಮೃತಪಟ್ಟವರು ಕೆಂಜೂರು ಗ್ರಾಮದ ನಿವಾಸಿ ಸತೀಶ್ ಪೂಜಾರಿ ಎಂದು ತಿಳಿಯಲಾಗಿದೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ: ಪಿರ್ಯಾದಿ ಸರೋಜ (43), ಕೆಂಜೂರು ಗ್ರಾಮ , ಬ್ರಹ್ಮಾವರ ತಾಲೂಕು ಇವರ ಗಂಡ ಸತೀಶ್‌ ಪೂಜಾರಿ, ಪ್ರಾಯ: 49 ವರ್ಷ ಎಂಬುವರು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ತನಗಿರುವ ಮಾನಸಿಕ ಖಿನ್ನತೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 16.10.2025 ರಂದು ರಂದು ಬೆಳಿಗ್ಗೆ 07:15 ಗಂಟೆಯಿಂದ ಸಂಜೆ 6:30 ಗಂಟೆಯ ಮದ್ಯಾವಧಿಯಲ್ಲಿ ಅವರ ಮೂಲ ಮನೆಯಾದ ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಚಗ್ರಿಬೆಟ್ಟುವಿನಲ್ಲಿರುವ ಅವರ ವಾಸದ ಮನೆಯ ಮಲಗುವ ಕೋಣೆಯ ಮರದ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆ ಯು.ಡಿ.ಆರ್ 71/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.