ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನಾಗರಾಜ ಎಂದು ತಿಳಿದು ಬಂದಿದೆ.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಸಾರಾಂಶ : ಪಿರ್ಯಾದಿದಾರ ರಾಧ ಪ್ರಾಯ 39 ವರ್ಷ ಗಂಡ: ನಾಗರಾಜ ವಾಸ: ಸಾಲಿಗ್ರಾಮ ಪಾರಂಪಳ್ಳಿ ಗ್ರಾಮ ಇವರ ಗಂಡ ನಾಗರಾಜ (46) ಎಂಬವರು ಸುಮಾರು 1 ವರ್ಷಗಳಿಂದ ಮಾನಸಿಕ ಖಾಯಿಲೆ ಯಿಂದ ಬಳಲುತ್ತಿದ್ದು ಈ ಬಗ್ಗೆ ಮುಕ್ಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ದಿನಾಂಕ 19.10.2025 ರಂದು ಬೆಳಿಗ್ಗೆ 11.30 ಗಂಟೆಗೆ ಮನೆಯಿಂದ ಹೋದವರು ನಂತರ ಕಾಣದೇ ಎಲ್ಲಾ ಕಡೆ ಹುಡುಕಾಡಿದಾಗ 14.00 ಗಂಟೆಗೆ ಬ್ರಹ್ಮಾವರ ತಾಲೂಕು ಸಾಲಿಗ್ರಾಮ ಪಾರಂಪಳ್ಳಿ ಗ್ರಾಮದ ಪಿರ್ಯಾದಿದಾರರ ಮನೆಯ ಬಾವಿಯಲ್ಲಿ ನಾಗರಾಜ ರವರ ಮೃತದೇಹ ಇರುವುದು ಕಂಡುಬಂದಿರುತ್ತದೆ .ಮೃತ ನಾಗರಾಜ ಇವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಈ ದಿನ ದಿನಾಂಕ 19.10.2025 ರಂದು 11.30 ಗಂಟೆಯಿಂದ 14.00 ಗಂಟೆಯ ಮಧ್ಯಾವಧಿಯಲ್ಲಿ ಬಾವಿಗೆ ಹಾರಿ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಕೋಟಠಾಣಾ ಯುಡಿಆರ್ಕ್ರಮಾಂಕ:61/2025 ಕಲಂ:194 BNSS ರಂತೆ ಪ್ರಕರಣ ದಾಖಲಿಸಲಾಗಿದೆ.



