Home Crime ಕಾಸರಗೋಡು: ಬಾವಿಗೆ ಬಿದ್ದು ಯುವಕ ಮೃತ್ಯು : ರಕ್ಷಿಸಲು ಹಾರಿದ್ದ ಸರೋದರನ ರಕ್ಷಣೆ….!!

ಕಾಸರಗೋಡು: ಬಾವಿಗೆ ಬಿದ್ದು ಯುವಕ ಮೃತ್ಯು : ರಕ್ಷಿಸಲು ಹಾರಿದ್ದ ಸರೋದರನ ರಕ್ಷಣೆ….!!

ಕಾಸರಗೋಡು: ಯುವಕನೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕುಂಬಳೆ ಸಮೀಪದ ನಾರಾಯಣಮಂಗಲ ಎಂಬಲ್ಲಿ ನಡೆದಿದ್ದು, ರಕ್ಷಿಸಲು ಬಾವಿಗೆ ಹಾರಿದ ಸಹೋದರನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದರು.

ಮೃತಪಟ್ಟ ಯುವಕನನ್ನು ನಾರಾಯಣ ಮಂಗಲದ ವಿವೇಕ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.

ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವಿವೇಕ್ ಬಾವಿಗೆ ಬೀಳುತ್ತಿರುವುದನ್ನು ಗಮನಿಸಿದ ಸಹೋದರ ತೇಜಸ್ ಬಾವಿಗೆ ಹಾರಿ ಬಾವಿಯಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಹಾಗೂ ಮನೆಯವರು ಇಬ್ಬರನ್ನು ಮೇಲಕ್ಕೆತ್ತಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಮಾಹಿತಿ ತಿಳಿದು ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇಬ್ಬರನ್ನು ಮೇಲಕ್ಕೆತ್ತಿದ್ದಾರೆ.

ವಿವೇಕ್‌ನನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ಮೃತರು ಕಾಸರಗೋಡು ಲೀಗಲ್ ಮೆಟ್ರಾಲಜಿ ಇಲಾಖೆಯ ಸೀನಿಯರ್ ಕ್ಲರ್ಕ್ ಹುದ್ದೆಯಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಆಶ್ರಿತ ನಿಯಮಾನುಸಾರ ಇವರಿಗೆ ಸರ್ಕಾರಿ ಉದ್ಯೋಗ ದೊರೆತಿತ್ತು.