ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಉದ್ಘಾಟನೆಗೆ ತಯಾರಿ ನಡೆಸಿರುವ ಘನ ತ್ಯಾಜ್ಯ ಘಟಕ ಕಾನೂನು ಬಾಹಿರವಾಗಿದ್ದು, ಇದರ ಉದ್ಘಾಟನೆಗೆ ಪ್ರಯತ್ನಿಸಿದರೆ ಸ್ಥಳೀಯರು ಶಾಂತಿಯುತವಾಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆಯ ಎಚ್ಚರಿಕೆ ಯನ್ನು ಸ್ಥಳೀಯರು ನೀಡಿದ್ದಾರೆ.
ಸ್ಥಳೀಯರ ಪರವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಘಟಕಕ್ಕೆ ಸಿಆರ್ಝಡ್ ಅನುಮತಿ ಇದುವರೆಗೆ ಸಿಕ್ಕಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇದೆ. ಹೀಗಾಗಿ ಎಲ್ಲಾ ಅನುಮತಿ ಪಡೆಯುವ ತನಕ ಹಾಗೂ ಹೈಕೋರ್ಟ್ನಲ್ಲಿ ಸ್ಥಳೀಯರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆದು ತೀರ್ಪು ಪ್ರಕಟಗೊಳ್ಳುವ ತನಕ ಉದ್ಘಾಟನೆ ನಡೆಸಬಾರದು ಎಂದು ಆಗ್ರಹಿಸಿದರು.
ಮಹೇಶ್ ಪೂಜಾರಿ, ಸಂತೋಷ್ ಪೂಜಾರಿ, ಅಶೋಕ್ ಪೂಜಾರಿ, ನಾಗರಾಜ್, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.



